BengaluruCrime

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಬೆಂಗಳೂರು; ಮನೆಯ ಕಿಟಕಿ ಕಂಬಿಗೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.. ಬೆಂಗಳೂರಿನ ವಿವೇಕನಗರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.,
ಕುಂದಾಪುರ ಮೂಲದ 30 ವರ್ಷ ಮೇಘನಾ ಶೆಟ್ಟಿ ಎಂಬಾಕೆಯೇ ಸಾವನ್ನಪ್ಪಿದ ಮಹಿಳೆಯಾಗಿದ್ದಾಳೆ.. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಂತೆ ಕಾಣುತ್ತಿದೆ.. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.. ಎರಡು ವರ್ಷಗಳ ಹಿಂದಷ್ಟೇ ಮೇಘನಾಗೆ ಮದುವೆಯಾಗಿತ್ತು.. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಸುಧೀರ್‌ ಶೆಟ್ಟಿ ಎಂಬಾತನ ಜೊತೆ ಮದುವೆ ನಡೆದಿತ್ತು.. ಆದ್ರೆ ಎರಡೇ ವರ್ಷಕ್ಕೆ ಮೇಘನಾ ಸಾವನ್ನಪ್ಪಿದ್ದಾರೆ.. ಮೇಘನಾ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪತಿ ಸುಧೀರ್‌ ಶೆಟ್ಟಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..
ಕಳೆದ ರಾತ್ರಿ 12 ಗಂಟೆ ಸುಮಾರಿಗೆ ಮೇಘಾ ಮನೆಗೆ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಘಟನೆಗೆ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ..

Share Post