BengaluruCrime

ನಡುರಸ್ತೆಯಲ್ಲಿ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ!

ಬೆಂಗಳೂರು; ಇತ್ತೀಚಿಗೆ ಕಾಮಾಕ್ಷಿಪಾಳ್ಯದಲ್ಲಿ ರೌಡಿ ಒಬ್ಬ ಯುವಕನೊಬ್ಬನನ್ನು ಬೆತ್ತಲೆ ಮಾಡಿ ಬೀದಿಯಲ್ಲಿ ಓಡಾಡಿಸಿದ್ದ.. ಇದೀಗ ಇಂತಹದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.. ಅದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ..

 ವ್ಯಕ್ತಿಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿರುವ ಘಟನೆ ಥಣಿಸಂದ್ರದ ಹಜ್ ಭವನದ ಮುಂಭಾಗ ನಡೆದಿದೆ. ರಸ್ತೆಯಲ್ಲೇ ವ್ಯಕ್ತಿಯ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿರುವ ದುಷ್ಕರ್ಮಿಗಳು, ನಂತರ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಬೆತ್ತಲೆ ಮಾಡಿ ಹಲ್ಲೆ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಘಟನೆ ನಡೆದ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ವಾಹನ ಸವಾರರು ಕಿರಿಕಿರಿ ಅನುಭವಿಸಿದರು.

Share Post