BengaluruCrime

ಬೆಂಗಳೂರಿನಲ್ಲಿ ಯುವತಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ!

ಬೆಂಗಳೂರು; ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಹಿ ಘಟನೆ ಮರೆಯುವ ಮುನ್ನವೇ ಬೆಂಗಳೂರಿನಲ್ಲೊಂದು ಪೈಶಾಚಿಕ ಕೃತ್ಯ ನಡೆದಿದೆ.. ಆಟೋದಲ್ಲಿ ತೆರಳುತ್ತಿದ್ದ ಯುವತಿಯನ್ನು ಗೋದಾಮೊಂದರ ಬಳಿ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ.. ಬೆಂಗಳೂರಿನ ಹೆಚ್‌ಎಸ್‌ಆರ್ದ್‌ ಲೇಔಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ; ಇದು ಷಡ್ಯಂತ್ರ, ಯಾವ ಕಾರಣಕ್ಕೂ ರಾಜೀನಾಮೆ ಕೊಡಲ್ಲ; ಸಿದ್ದರಾಮಯ್ಯ

ಯುವತಿ ಬೆಂಗಳೂರಿನ ಪಬ್‌ವೊಂದಕ್ಕೆ ಹೋಗಿದ್ದಳು.. ಮದ್ಯೆ ಸೇವನೆ ಮಾಡಿದ್ದ ಯುವತಿ ದ್ವಿಚಕ್ರಮ ವಾಹನದಲ್ಲಿ ಮನೆಗೆ ಹೋಗುತ್ತಿದ್ದಾಗ ಅಪಘಾತವಾಗಿದೆ.. ಹೀಗಾಗಿ ಬೈಕ್‌ ಅಲ್ಲಿಯೇ ಬಿಟ್ಟು ಆಟೋದಲ್ಲಿ ಮನೆಗೆ ಹೊರಟಿದ್ದಳು.. ಯುವತಿಯ ಸ್ಥಿತಿ ಕಂಡ ಆಟೋ ಚಾಲಕ, ಆಕೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.. ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಗೋದಾಮೊಂದರ ಬಳಿ ಕರೆದೊಯ್ದ ಆಟೋ ಚಾಲಕ, ಅಲ್ಲಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.. ನಂತರ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

ಇದನ್ನೂ ಓದಿ; ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಡಿ.ಕೆ.ಶಿವಕುಮಾರ್‌

ಯುವತಿಯ ಕರೆ ಮಾಡಿದ್ದರಿಂದ ಸ್ಥಳಕ್ಕೆ ಬಂದು ಅರೆಪ್ರಜ್ಞಾವಸ್ಥೆಯಲ್ಲಿದ್ದಾಕೆಯನ್ನು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾಳೆ.. ವೈದ್ಯರು ಪರೀಕ್ಷೆ ನಡೆಸಿದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿರೋದು ದೃಢಪಟ್ಟಿದೆ..

 

Share Post