BengaluruCrime

ಜಮೀರ್‌ ಮನೆ ಮೇಲೆ ಎಸಿಬಿ ದಾಳಿ ಹಿನ್ನೆಲೆ; ಬೆಂಬಲಿಗನಿಂದ ಆತ್ಮಹತ್ಯೆ ಯತ್ನ

ಬೆಂಗಳೂರು; ಚಾಮರಾಜಪೇಟೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರ ಆಸ್ತಿಗಳ ಮೇಳೆ ಎಸಿಬಿ ರೇಡ್‌ ಮಾಡಿದ್ದಕ್ಕೆ ಅವ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬೆಂಬಲಿಗನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

ಕ್ಯಾನ್‌ನಲ್ಲಿ ಪೆಟ್ರೋಲ್‌ ತಂದಿದ್ದ ಜಮೀರ್‌ ಅಭಿಮಾನಿ ಏಕಾಏಕಿ ಮೈಮೇಲೆ ಸುರಿದುಕೊಂಡಿದ್ದಾನೆ. ಕೂಡಲೇ ಅಲ್ಲಿದ್ದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ. ನಂತರ ಆತನನ್ನು ಬಂಧಿಸಿ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಗಿದೆ.

Share Post