Crime

ವಿಶಾಖಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸಾವು

ವಿಶಾಖಪಟ್ಟಣ: ಚಂದ್ರಪಾಲಂ ಶಾಲೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣದ ಮಧುರವಾಡದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರಲ್ಲಿ ಪುಟ್ಟ ಬಾಲಕಿ ಕೂಡ ಇರುವುದಾಗಿ ಸ್ಥಳೀಯರು ಹೇಳಿದ್ದಾರೆ. ಡಿಕ್ಕಿ ಹೊಡೆದ ಲಾರಿ ಡ್ರೈವರ್‌ ಎಸ್ಕೇಪ್‌ ಆಗಿದ್ದು ಆರೋಪಿಗಾಗಿ ಪೊಲೀರು ಬಲೆ ಬೀಸಿದ್ದಾರೆ. ಇನ್ನು ಮೃತದೇಹಗಳನ್ನು ಹತ್ತಿರದ ಜಿಲ್ಲಾಸ್ಪತ್ರೆಗೆ ಪೋಸ್ಟ್‌ ಮಾರ್ಟಮ್‌ ಮಾಡಲು ರವಾನಿಸಲಾಗಿದೆ.

Share Post