CrimeDistricts

ಚಿಕ್ಕಮಗಳೂರು ಬಳಿ‌ ದುರಂತ; ನಾಲ್ವರ ದುರ್ಮರಣ!

ಚಿಕ್ಕಮಗಳೂರು; ಬಣಕಲ್‌ ಸಮೀಪದ ದೇವರ ಮನೆ ಕ್ರಾಸ್ ಬಳಿ ಭೀಕರ ಸರಣಿ ಅಪಘಾತ ನಡೆದಿದೆ.. ದುರ್ಘಟನೆಯಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ..

  ಮೆಸ್ಕಾಂ ಇಲಾಖೆಗೆ ಸೇರಿದ ಲಾರಿ, ಆಲ್ಟೋ ಕಾರು ಹಾಗೂ ಮಾರುತಿ ಓಮ್ನಿ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ.. ಘಟನೆಯಲ್ಲಿ ಪ್ರಭಾಕರ್, ಹಂಪಯ್ಯ, ಮಂಜಯ್ಯ, ಪ್ರೇಮಾ ಎಂಬುವವರು ಸಾವನ್ನಪ್ಪಿದ್ದಾರೆ..

   ಓಮ್ನಿ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿತ್ತು. ಮೆಸ್ಕಾಂ ಲಾರಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿತ್ತು.. ದುರ್ಘಟನೆಯಲ್ಲಿ 12 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.. ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

Share Post