Crime

ಹಿರಿಯೂರು ಬಳಿ ಸರಣಿ ಅಪಘಾತ; ಮಾರುಕಟ್ಟೆಗೆ ಹೊರಟಿದ್ದ ನಾಲ್ವರು ರೈತರ ದುರ್ಮರಣ

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಆಲೂರು ಕ್ರಾಸ್‌ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ರೈತರು ದುರ್ಮರಣಕ್ಕೀಡಾಗಿದ್ದಾರೆ. ರೈತರು ಲಾರಿಯಲ್ಲಿ ಈರುಳ್ಳಿಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲೂರು ಕ್ರಾಸ್‌ ಬಳಿ ಲಾರಿ ಪಲ್ಟಿಯಾಗಿದೆ. ಈ ವೇಳೆ ಪಲ್ಟಿಯಾದ ಲಾರಿಗೆ ಹಿಂದಿನಿಂದ ಬಂದ ಕಾರು, ಹಲವು ಲಾರಿಗಳು ಡಿಕ್ಕಿ ಹೊಡೆದಿವೆ.


ಮೃತಪಟ್ಟವರನ್ನು ಗದಗ ಜಿಲ್ಲೆಯ ಹುಯಿಲುಗೋಳದ ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಾಶಂತ್ ಹಟ್ಟಿ (36) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನಕ್ಕೆ ಗಾಯಗಳಾಗಿವೆ. ಅವರನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಪಲ್ಟಿಯಾಗಿದ್ದರಿಂದಾಗಿ ಹೆದ್ದಾರಿ ತುಂಬಾ ಈರುಳ್ಳಿ ಚೆಲ್ಲಿದೆ.


ಲಾರಿ ಈರುಳ್ಳಿ ತುಂಬಿಕೊಂಡು ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿತ್ತು. ಆದರೆ ಆಲೂರು ಕ್ರಾಸ್‌ ಬಳಿ ಬರುತ್ತಿದ್ದಂತೆ ಟೈರ್‌ ಸ್ಫೋಟಗೊಂಡಿದೆ. ಇದ್ರಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆಯಲ್ಲೇ ಉರುಳಿಬಿದ್ದು ಈ ದುರಂತ ಸಂಭವಿಸಿದೆ.

Share Post