CrimeDistricts

ಕಾರಿಗೆ ಅಡ್ಡ ಬಂದ ಕುದುರೆ; ಭೀಕರ ಸರಣಿ ಅಪಘಾತ

ರಾಮನಗರ; ಕುದುರೆಯೊಂದು ಕಾರಿಗೆ ಅಡ್ಡ ಬಂದಿದ್ದರಿಂದ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.. ಕಾರು ಗುದ್ದಿದ್ದರಿಂದ ಕುದುರೆ ಸಾವನ್ನಪ್ಪಿದೆ.. ಮಾಗಡಿ ತಾಲ್ಲೂಕು ಮಾಚೋಹಳ್ಳಿ ಗೇಟ್ ಬಳಿ ಈ ದುರ್ಘಟನೆ ನಡೆದಿದೆ.. ಕಿಯಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ..

   ಕಿಯಾ ಕಾರಿಗೆ ಕುದುರೆ ಅಡ್ಡಬಂದಿದ್ದು ಕಾರು ಮೊದಲು ಕುದುರೆಗೆ ಡಿಕ್ಕಿ ಹೊಡೆದಿದೆ.. ಇದರಿಂದ ಕುದುರೆ ಸ್ಥಳದಲ್ಲೇ‌ ಮೃತಪಟ್ಟಿದೆ.. ನಂತರ ಕಾರು ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.. ಇದೇ ವೇಳೆ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ.. ಇದರಿಂದಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ..

  ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಐದು ಮಂದಿಗೆ ತೀವ್ರ ಗಾಯಗಳಾಗಿವೆ.. ಎಲ್ಲರನ್ನೂ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.. ಸೋಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

 

Share Post