CrimeDistrictsHealth

ಮನೆಗೆ ಆಕಸ್ಮಿಕ ಬೆಂಕಿ; ಬಾರ್‌ ಅಂಡ್‌ ರೆಸ್ಟೋರೆಂಟ್‌ ಮಾಲೀಕ ದಾರುಣ ಸಾವು!

ಉಡುಪಿ; ಮನೆಗೆ ಬೆಂಕಿ ಬಿದ್ದಿದ್ದರಿಂದಾಗಿ ತೀವ್ರ ಅಸ್ವಸ್ಥಗೊಂಡಿದ್ದ ಬಾರ್‌ ಅಂಡ್‌ ರೆಸ್ಟೋರೆಂಟ್‌ ಮಾಲೀಕ ದಾರುಣವಾಗಿ ಸಾವನ್ನಪ್ಪಿದ್ದಾರೆ. ಉಡುಪಿಯ ಅಂಬಲಪಾಡಿಯಲ್ಲಿರುವ ಶೆಟ್ಟಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಮಾಲೀಕರಾಗಿದ್ದ ರಮಾನಂದ ಶೆಟ್ಟಿ ಎಂಬುವವರೇ ಸಾವನ್ನಪ್ಪಿದವರು.. ಇವರು ತೀವ್ರವಾಗಿ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ..

ಇದನ್ನೂ ಓದಿ; ದಕ್ಷಿಣ ಕನ್ನಡದ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಕತ್ರಿನಾ ಕೈಫ್‌ ಭೇಟಿ

ಉಡುಪಿಯ ಅಂಬಲಪಾಡಿಯ ಗಾಂಧಿನಗರದಲ್ಲಿ ಇವರ ಮನೆ ಇದೆ.. ಈ ಮನೆಯಲ್ಲಿ ಆಕಸ್ಮಿಕ ಬೆಂಕಿ ದುರಂತ ಸಂಭವಿಸಿತ್ತು.. ಮನೆಯವರು ಒಳಗೇ ಸಿಲುಕಿಕೊಂಡಿದ್ದರು.. ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಲಾಯಿತು.. ಈ ನಡುವೆ ರಮಾನಂದ ಶೆಟ್ಟಿಯವರ ಪುತ್ರ ಹಾಗೂ ಪುತ್ರಿ ಸ್ವಾನದ ಕೋಣೆಯಲ್ಲಿ ಆಶ್ರಯ ಪಡೆದಿದ್ದರು.. ಹೀಗಾಗಿ ಅವರು ಬಚಾವ್‌ ಆದರು.

ಇದನ್ನೂ ಓದಿ;ಹೆಂಡತಿ ತವರಿಗೆ ಹೋದಾಗ ಗಂಡ ಮಾಡೋ ಕೆಲಸಗಳೇನು ಗೊತ್ತಾ..?

ಆದ್ರೆ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಹೊಗೆಯಿಂದಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು.. ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ..

Share Post