BengaluruCrime

ತುಮಕೂರು ಜೈಲಿಗೆ ನಟ ದರ್ಶನ್ ಶಿಫ್ಟ್

ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಸೇರಿ ಪ್ರಕರಣದಲ್ಲಿ ಹಲವು ಆರೋಪಿಗಳನ್ನ ತುಮಕೂರ್ ಜೈಲ್ ಗೆ ಶಿಫ್ಟ್ ಮಾಡಲಾಗಿದೆ..

 ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಕೇಂದ್ರ ಕಾರಾಗೃಹ ಜೈಲಿಗೆ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎ8 ರವಿ, ಎ15 ಕಾರ್ತಿಕ್, ಎ16 ಕೇಶವ ಮೂರ್ತಿ, ಎ17 ನಿಖಿಲ್ ನಾಯಕ್ ಅವರನ್ನು ಸ್ಥಳಾಂತರ ಕೋರಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಜೈಲು ಅಧಿಕಾರಿಗಳು ಕೋರಿದ್ದರು.

ಇದಕ್ಕೆ ಕೋರ್ಟ್ ಸಮ್ಮತಿಸಿದ ಕಾರಣ, ಎ.2 ಆರೋಪಿ ನಟ ದರ್ಶನ್ ಸೇರಿದಂತೆ ಐವರು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲಿದ್ದಾರೆ.

 

Share Post