CrimeDistricts

ದೆಹಲಿಯ ಕರ್ನಾಟಕ ಭವನದ ನೌಕರ ಆತ್ಮಹತ್ಯೆ!; ಕಾರಣ ಏನು ಗೊತ್ತಾ..?

ವಿಜಯನಗರ; ದೆಹಲಿಯ ಕರ್ನಾಟಕ ಭವನದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಸ್ವಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ‌. ಅಯ್ಯನಹಳ್ಳಿ ಗ್ರಾಮದ ಮಾರುತಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ನೌಕರವಾಗಿದ್ದಾನೆ.. ಎರಡು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮಕ್ಕೆ ಬಂದಿದ್ದ ಇವರು ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

ಪತ್ನಿ, ಮಕ್ಕಳನ್ನು ಅವರ ತವರಿಗೆ ಬಿಟ್ಟಿದ್ದ ಮಾರುತಿ, ತಂದೆ-ತಾಯಿಯನ್ನು ನೋಡಿಕೊಂಡು ಬರುತ್ತೇನೆ ಎಂದು ಸ್ವಗ್ರಾಮಕ್ಕೆ ಬಂದಿದ್ದ.. ತಂದೆ-ತಾಯಿಯನ್ನು ಮಾತನಾಡಿಸಿದ ಮೇಲೆ ಕಾನಾಹೊಸಳ್ಳಿ ಹೊರವಲದ ಹುಣಸೆ ಮರಕ್ಕೆ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಮಾರುತಿ ದೆಹಲಿಯ ಕರ್ನಾಟಕ ಭವನದ ಕಿಚನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ..

ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.. ಘಟನೆಗೆ ಕಾರಣ ಏನು ಅನ್ನೋದು ಇನ್ನೂ ತಿಳಿದುಬಂದಿಲ್ಲ..

Share Post