CrimeDistricts

ಪತ್ನಿ ಜೊತೆ ಅನೈತಿಕ ಸಂಬಂಧ; ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಪತಿ

ಚಿಕ್ಕಬಳ್ಳಾಪುರ; ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಸ್ನೇಹಿತನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕತ್ತು ಕುಯ್ದು ರಕ್ತ ಕುಡಿದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಟ್ಟೆ ವ್ಯಾಪಾರಿ ವಿಜಯ್‌ ಎಂನಾತನೇ ಈ ಕೃತ್ಯ ಎಸಗಿರುವ ಆರೋಪಿ.

ಮಾರೇಶ್‌ ಎಂಬಾತನೇ ದಾಳಿಗೀಡಾದ ವ್ಯಕ್ತಿ. ಸದ್ಯ ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವಿಜಯ್‌ನನ್ನು ಬಂಧಿಸಿದ್ದಾರೆ. ಆರೋಪಿ ವಿಜಯ್‌ನ ಪತ್ನಿ ಜೊತೆ ಮಾರೇಶ್‌ ಅನೈತಿಕ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. ಇದು ವಿಜಯ್‌ಗೆ ಗೊತ್ತಾಗಿದ್ದು, ಮಾರೇಶ್‌ನನ್ನು ಕರೆಸಿಕೊಂಡು ಸಿದ್ದೇಪಲ್ಲಿ ಕ್ರಾಸ್‌ ಬಳಿ ಈ ಕೃತ್ಯ ಎಸಗಿದ್ದ. ಜೂನ್‌ 19ರಂದು ಈ ಕೃತ್ಯ ಎಸಗಲಾಗಿದ್ದು, ಅಂದು ಆ ದೃಶ್ಯವನ್ನು ಚಿತ್ರೀಕರಿಸಲಾಗಿತ್ತು. ಇದೀಗ ದೃಶ್ಯ ವೈರಲ್‌ ಆಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Share Post