CrimeNational

ಮಧ್ಯಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ದಲಿತ ಯುವಕರಿಗೆ ಮಲ ತಿನ್ನಿಸಿದ ದುರುಳರು..!

ಮಧ್ಯಪ್ರದೇಶ; ಇತ್ತೀಚೆಗೆ ಆದಿವಾಸಿ ವ್ಯಕ್ತಿ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ವರದಿಯಾಗಿತ್ತು. ಈ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕತ್ಯ ಎಸಗಿರುವ ಬಗ್ಗೆ ಸುದ್ದಿಯಾಗಿದೆ. ಇಬ್ಬರು ದಲಿತ ಯುವಕರಿಗೆ ಮಲ ತಿನ್ನಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯ ಶಿವಗಿರಿ ಎಂಬಲ್ಲಿ ನಡೆದಿದೆ.

ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂಬ ಆರೋಪಿದ ಮೇಲೆ ಇಬ್ಬರು ದಲಿತ ಯುವಕರನ್ನು ಹಿಡಿದ ಕೆಲವರು ಮುಖಕ್ಕೆ ಮಸಿ ಬಳಿದು, ಮಲ ತಿನ್ನಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಜೂನ್‌ 30ರಂದೇ ಈ ಗಟನೆ ನಡೆದಿದ್ದು, ಇದಿಗ ಬೆಳಕಿಗೆ ಬಂದಿದೆ. ದಲಿತ ಯುವಕರ ಮನೆಗಳನ್ನು ಕೂಡಾ ಧ್ವಂಸ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ 23 ಮತ್ತು 24 ವರ್ಷ ವಯಸ್ಸಿನ ಇಬ್ಬರು ಯುವಕರು 26 ವರ್ಷದ ಯುವತಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಈ ವಿಷಯ ತಿಳಿದ ಯುವತಿಯ ಮನೆಯವರು, ಯುವತಿಗೆ ಹೇಳಿ ಇಬ್ಬರೂ ಯುವಕರನ್ನು ಕರೆಸಿಕೊಂಡಿದ್ದಾರೆ. ನಂತರ ಅವರಿಗೆ ಚಪ್ಪಲಿ ಹಾರ ಹಾಕಿ, ಮುಖಕ್ಕೆ ಮಸಿ ಬಳಿದಿದ್ದಾರೆ. ಅನಂತರ ಮಲ ತಿನ್ನಿಸಿ ಊರಲ್ಲಿ ಮೆರವಣಿಗೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಮಹಿಳೆಯರು ಸೇರಿ ಏಳು ಜನರನ್ನು ಬಂಧಿಸಲಾಗಿದೆ.

ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ್ದರು. ಆಕೆಯನ್ನು ಸ್ಪರ್ಶಿಸಿದ್ದರು. ಹೀಗಾಗಿ ಅವರು ಮೇಲೆ ದೌರ್ಜನ್ಯ ಮಾಡಿದ್ದೇವೆ ಎಂದು ಆರೋಪಿಗಳು ಹೇಳಿದ್ದರು. ಆದ್ರೆ ತನಿಖೆ ವೇಳೆ ಇದೆಲ್ಲಾ ಸುಳ್ಳು ಅನ್ನೋದು ಸಾಬೀತಾಗಿದೆ ಎಂದು ತಿಳಿದುಬಂದಿದೆ.

Share Post