BengaluruCrime

ಬೆಂಗಳೂರಲ್ಲಿ ಮತ್ತೊಂದು ಯುವತಿ ಅನುಮಾನಾಸ್ಪದ ಸಾವು!; ಏನಾಗ್ತಿದೆ ರಾಜ್ಯದಲ್ಲಿ..?

ಬೆಂಗಳೂರು; ರಾಜ್ಯದಲ್ಲಿ ಯುವತಿಯರ ಕೊಲೆ ಹಾಗೂ ಅನುಮಾನಾಸ್ಪದ ಸಾವಿನ ಪ್ರಕರಣ ಹೆಚ್ಚಾಗುತ್ತಿವೆ.. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ.. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಬ್ಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ.. ಬೆಂಗಳೂರಿನ ಹೊರವಲಯದಲ್ಲಿರುವ ಚಂದಾಪುರ ಸಮೀಪದ ಹೀಲಲಿಗೆ ಬಳಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವನ್ನಪ್ಪಿದ್ದಾಳೆ.. ಇಲ್ಲಿ ಬಿಸಿಇಟಿ ಇಂಜಿನಿಯರಿಂಗ್​ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18) ಪತ್ತೆಯಾಗಿದ್ದಾಳೆ..

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ(18) ಕಾಲೇಜ್ ಅಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.. ಆದ್ರೆ ಅದೇನಾಯ್ತೋ ಏನೋ ಆಕೆ ತನ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.. ಪಕ್ಕದ ಕೋಣೆಯಲ್ಲಿದ್ದ ಪ್ರಗತಿ ಎಂಬ ವಿದ್ಯಾರ್ಥಿನಿ, ಹರ್ಷಿತ ಇರುವ ಕೊಠಡಿಯ ಬಾಗಿಲು ಎಷ್ಟು ಬಡಿದರೂ ತೆಗೆದಿಲ್ಲ.. ಇದರಿಂದ ಅನುಮಾನಗೊಂಡು ಸ್ಟೂಲ್‌ ಮೇಲೆ ಹತ್ತಿ ಕಿಟಕಿಯಿಂದ ಇಣುಕಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ..

ಕೂಡಲೆ ವಿದ್ಯಾರ್ಥಿನಿ ಪ್ರಗತಿ ಅಕ್ಕ-ಪಕ್ಕದ ಕೋಣೆಯಲ್ಲಿದ್ದ ಸಹಪಾಠಿಗಳಿಗೆ ವಿಷಯ ತಿಳಿಸಿದ್ದಾಳೆ.. ಬಳಿಕ ಎಲ್ಲರೂ ಸೇರಿ ಬಾಗಿಲು ಮುರಿದು ಹರ್ಷಿತಾ ಕೋಣೆಯೊಳಗಡೆ ಹೋಗಿ, ಆಕೆಯನ್ನು ನೇಣು ಕುಣಿಕೆಯಿಂದ ಕೆಳಗೆ ಇಳಿಸಿ ಆಸ್ಪತ್ರೆಗೆ ಕರೆದೆಯ್ಯೊಲು ಮುಂದಾಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಹರ್ಷಿತಾ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ತಿಳಿದುಬಂದಿದೆ..

Share Post