CrimeDistricts

ಧಾರವಾಡದಲ್ಲಿ ವಿಷ ಸೇವಿಸಿ ಎಎಸ್‌ಐ ಆತ್ಮಹತ್ಯೆ

ಹುಬ್ಬಳ್ಳಿ; ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡದ ಕುಂದಗೋಳ ಬಳಿಯ ಗುಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡವರನ್ನು ಬಸವರಾಜ ಶಾಂತವೀರಪ್ಪ ಪಾಯಣ್ಣವರ ಎಂದು ಗುರುತಿಸಲಾಗಿದೆ.

ಬಸವರಾಜ ಶಾಂತವೀರಪ್ಪ ಅವರು ಗುಡಿಗೇರಿ ಪೊಲೀಸ್ ಠಾಣೆಯ ಎಎಸ್‌ಐ ಆಗಿದ್ದರು. ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ ಶಾಂತವೀರಪ್ಪ ಅವರು, ವಸತಿಗೃಹದ ಆವರಣದಲ್ಲಿರುವ ದೇಗುಲದ ಬಳಿಯೇ ಮಲಗಿದ್ದರು. ಕುಟುಂಬಸ್ಥರು ಊಟಕ್ಕೆ ಕರೆಯಲು ಹೋದಾಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಅವರು ಗದಗದ ಗಜೇಂದ್ರಗಢದ ಶಾಂತಗಿರಿ ಗ್ರಾಮದವರು ಎಂದು ತಿಳಿದುಬಂದಿದೆ. ಅವರು ಕಾಲುನೋವಿನಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

 

Share Post