CrimeDistricts

ವ್ಯಕ್ತಿಗೆ ಇರಿದ ಕತ್ತಿಯಿಂದಲೇ ಪೊಲೀಸರ ಮೇಲೆ ದಾಳಿ; ಗುಂಡೇಟು!

ಶಿವಮೊಗ್ಗ; ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದಿದ್ದಲ್ಲದೆ ಹಿಡಿಯಲು ಬಂದ ಪೊಲೀಸರ ಮೇಲೂ ಆರೋಪಿ ಕತ್ತಿ ಬೀಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರೌಡಿಶೀಟರ್‌ ಮಂಜುನಾಥ್‌ ಅಲಿಯಾಸ್‌ ಓಲಂಗ ಎಂಬಾತನೇ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ.

ಆರೋಪಿ ಓಲಂಗ ಮೂರು ದಿನಗಳ ಹಿಂದೆ ಫ್ರೀಡಂ ಪಾರ್ಕ್‌ ಬಳಿ ಶಶಿ ಎಂಬಾತನ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಯನಗರ ಠಾಣೆ ಪೊಲೀಸರು, ಆರೋಪಿ ಓಲಂಗನನ್ನು ಬಂಧಿಸಿದ್ದರು. ಇಂದು ಮುಂಜಾನೆ ಮಹಜರು ನಡೆಸಲು ಪೊಲೀಸರು ಆರೋಪಿಯನ್ನು ಸ್ಥಳಕ್ಕೆ ಕರೆದುಕೊಂಹೋಗಿದ್ದರು. ಈ ವೇಳೆ ಆರೋಪಿ ಓಲಂಗ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಮೊದಲಿಗೆ ಗಾಳಿಯಲ್ಲಿ ಗುಂಡು ಹೊಡೆದು ಎಚ್ಚರಿಕೆ ಕೊಟ್ಟಿದ್ದಾರೆ. ಆದರೂ ಆತ ಕೇಳಲಿಲ್ಲ. ಹೀಗಾಗಿ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ.

ಗಾಯಗೊಂಡ ಪೊಲೀಸ್ ಸಿಬ್ಬಂದಿ ರವಿ ಹಾಗೂ ಗುಂಡೇಟಿನಿಂದ ಗಾಯಗೊಂಡ ಆರೋಪಿ ಓಲಂಗನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share Post