CrimeNational

ನಡು ರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ ಯುವಕನ ಕೊಲೆ ಯತ್ನ!

ಶ್ರೀಕಾಕುಳಂ(Andhrapradesh); ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಭೀಕರ ಘಟನೆಯೊಂದು ನಡೆದಿದೆ.. ಜನನಿಬಿಡ ರಸ್ತೆಯಲ್ಲೇ ಎಲ್ಲರೂ ನೋಡುತ್ತಿದ್ದಂತೆ ಯುವಕನೊಬ್ಬನ ಮೇಲೆ ಚಾಕುವಿನಿಂದ ದಾಳಿ ನಡೆದಿದೆ.. ವ್ಯಕ್ತಿಯೊಬ್ಬ ಏಕಾಏಕಿ ದಾಳಿ ನಡೆಸಿದ್ದು, ಚಾಕುವಿನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿದ್ದಾನೆ.. ಸದ್ಯ ಯುವಕ ಸ್ಥಿತಿ ಗಂಭೀರವಾಗಿದ್ದು, ಆತನನ್ನು ರಿಮ್ಸ್‌ ಆಸ್ಪತ್ರೆಗೆ ಸೇರಿಸಲಾಗಿದೆ..

ಇದನ್ನೂ ಓದಿ; ಆ.23ಕ್ಕೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ!; ಏನಿದು ಹೊಸ ಟ್ವಿಸ್ಟ್‌..?

ಶ್ರೀಕಾಕುಳಂ ಜಿಲ್ಲೆ ರಾಜಾಂನಲ್ಲಿ ಈ ಕೃತ್ಯ ಎಸಗಲಾಗಿದೆ.. ಇಲ್ಲಿನ ಮಲ್ಲಿಕಾರ್ಜುನ ಕಾಲೊನಿಯ ಶೇಖರ್‌ ಎಂಬಾತನ ಮೇಲೆ ಗೊಲ್ಲರ ಬೀದಿಯ ನಾಗಳ್ಳ ಗಣೇಶ್‌ ದಾಳಿ ಮಾಡಿದ್ದಾನೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.. ಘಟನೆಯಿಂದಾಗಿ ಮಲ್ಲಿಕಾರ್ಜುನ್‌ ತೀವ್ರವಾಗಿ ಗಾಯಗೊಂಡಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.. ಇನ್ನೊಂದೆಡೆ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ..

ಇದನ್ನೂ ಓದಿ; ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ!

Share Post