BengaluruCrime

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು; ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ವ್ಯಕ್ತಿಯೊಬ್ಬರ ಬರ್ಬರ ಕೊಲೆಯಾಗಿದೆ.. ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣ ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.. ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ..

ತುಮಕೂರಿನ ಮಧುಗಿರಿ ಮೂಲಕ ರಮೇಶ್‌ ಎಂಬಾತನೇ ಈ ಕೊಲೆ ಮಾಡಿದಾತ. ಬಿಎಂಟಿಸಿ ಬಸ್‌ನಲ್ಲಿ ವಿಮಾನ ನಿಲ್ದಾಣದಕ್ಕೆ ಬಂದ ರಮೇಶ್‌, ರಾಮಕೃಷ್ಣ ಜೊತೆ ಜಗಳ ತೆಗೆದಿದ್ದಾನೆ.. ನಂತರ ಅಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.. ತೀವ್ರ ರಕ್ತಸ್ರಾವದಿಂದ ರಾಮಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.. ಅಲ್ಲಿಯೇ ಇದ್ದ ಪೊಲೀಸರು ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ..

Share Post