CrimeInternational

ಹೊತ್ತಿ ಉರಿದ ಏರ್‌ ಇಂಡಿಯಾ ವಿಮಾನ; ಪ್ರಯಾಣಿಕರು ಸೇಫ್‌

ಮಸ್ಕತ್‌; ಏರ್‌ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು. ಆದ್ರೆ ವಿಮಾನ ಸಕಾಲದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದರಿಂದ ಪ್ರಯಾಣಿಕರೆಲ್ಲಾ ಸೇಫ್‌ ಆಗಿದ್ದಾರೆ. ಈ ಘಟನೆ ನಡೆದಿರೋದು ಮಸ್ಕತ್‌ ನಲ್ಲಿ. 

ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಕೇರಳದ ಕೊಚ್ಚಿಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ, ಮಸ್ಕತ್​ ಏರ್​ಪೋರ್ಟ್​​ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಕೂಡಲೇ  ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಭೂಸ್ಪರ್ಶ ಮಾಡುವ ವೇಳೆ 14 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಪ್ರಯಾಣಿಕರ ವಿಮಾನದಿಂದ ಹೊಗೆ ಹೊರಬರಲು ಪ್ರಾರಂಭಿಸಿದ ನಂತರ ಪ್ರಯಾಣಿಕರನ್ನು ಸ್ಲೈಡ್‌ಗಳಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಿಂದ ಸ್ಥಳಾಂತರಿಸಲಾಯಿತು.

Share Post