CrimeNational

ಬಿರ್ಭೂಮ್‌ನಲ್ಲಿ 8ಜನರ ಹತ್ಯೆ ಕೇಸ್:‌ ಹತ್ತು ಮಂದಿ ಪೊಲೀಸ್‌ ಕಸ್ಟಡಿಗೆ

ಪಶ್ಚಿಮ ಬಂಗಾಳ: ಟಿಎಂಸಿ ಕಾರ್ಯಕರ್ತನ ಹತ್ಯೆ ಖಂಡಿಸಿ ಪಶ್ಚಿಮ ಬಂಗಾಳದ ಬಿರ್ಭೂಮ್‌ನಲ್ಲಿ ಮನೆಗಳಿಗೆ ಬೆಂಕಿ ಹಚ್ಚಿ ಎಂಟು ಮಂದಿಯನ್ನು ಸಜೀವ ದಹನ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೊಲ್ಕತ್ತಾ ನ್ಯಾಯಾಲಯ ಸ್ವಯಂಪದರೇರಿತವಾಗಿ ಸುಮೊಟೊ ವಿಚಾರಣೆಯನು ಕೈಗೆತ್ತಿಕೊಂಡು ಇಂದು ವಿಚಾರಣೆ ನಡೆಸಿತು. ವಿಚಾರಣೆಗೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಿ ಎಂದು ಕೋರ್ಟ್‌ಆದೇಶಿಸಿದೆ. ಹದಿನಾಲ್ಕು ದಿನಗಳ ಕಾಲ 10 ಮಂದಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ನಾಳೆ ಮಧ್ಯಾಹ್ನ 2ಗಂಟೆಯೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೊಲ್ಕತ್ತಾ ಹೈಕೋರ್ಟ್‌ ಸೂಚನೆ ನೀಡಿದೆ. ದೆಹಲಿ ಎಫ್‌ಎಸ್‌ಎಲ್‌ ತಂಡ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಿ ಹಿಂಸಾಚಾರ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ ಎಂದು ಹೈಕೋರ್ಟ್‌ ಆದೇಶಿಸಿದೆ.

Share Post