CrimeNational

ಏರ್‌ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ತಿರುವನಂತಪುರಂ; ತಿರುವನಂತಪುರಂದ ಕಣ್ಣೂರಿನಲ್ಲಿ ಏರ್‌ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. 135 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಕ್ಕಿಯೊಂದು ಅದಕ್ಕೆ ಬಡಿದಿದೆ. ಈ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಕೋಝಿಕ್ಕೋಡ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದಕ್ಕೆ ಹಕ್ಕಿಯೊಂದು ಬಡಿದಿದೆ. ವಿಮಾನದಲ್ಲಿದ್ದ 135 ಪ್ರಯಾಣಿಕರಲ್ಲಿ 85 ಜನ ಕೋಝಿಕ್ಕೋಡ್ ಹಾಗೂ 50 ಮಂದಿ ಕಣ್ಣೂರಿನವರಾಗಿದ್ದಾರೆ. ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ. ವಿದೇಶಕ್ಕೆ ಹೋಗುವ ಪ್ರಯಾಣಿಕರಿಗೆ ಇತರ ವಿಮಾನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ದೆಹಲಿಗೆ ಹೋಗುವ ಪ್ರಯಾಣಿಕರನ್ನು ಕಣ್ಣೂರಿನ ಹೋಟೆಲ್‌ಗಳಲ್ಲಿ ಇರಿಸಲಾಗಿದೆ.

Share Post