BengaluruCrime

Breaking; ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್‌; ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರ

ಬೆಂಗಳೂರು; ಬೆಂಗಳೂರಿನ ವೈಟ್‌ ಫೀಲ್ಡ್‌ನ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳೆಲ್ಲರೂ ಒಂದೇ ಕಂಪನಿಗೆ ಸೇರಿದವರು ಎಂದು ತಿಳಿದುಬಂದಿದೆ. ಮೈಕ್ರೋಚಿಪ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಐವರು ಉದ್ಯೋಗಿಗಳು ಊಟಕ್ಕೆಂದು ಬಂದಿದ್ದರು. ಇದೇ ವೇಳೆ ಅವರು ಕೂತಿದ್ದ ಟೇಬಲ್‌ ಬಳಿಯೇ ಸ್ಫೋಟ ಸಂಭವಿಸಿದೆ. ಹೀಗಾಗಿ ಐವರೂ ಗಾಯಗೊಂಡಿದ್ದಾರೆ. ಇದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಮೈಕ್ರೋ ಚಿಪ್‌ ಕಂಪನಿ ಉದ್ಯೋಗಿಗಳಾದ ಸ್ವರ್ಣ ನಾರಾಯಣಪ್ಪ, ಫಾರೂಕ್‌, ದೀಪಾಂಶು ಹಾಗೂ ಇನ್ನಿಬ್ಬರು ಉದ್ಯೋಗಿಗಳು ಗಾಯಗೊಂಡಿದ್ದಾರೆ. ಫಾರೂಕ್‌ ಹಾಗೂ ದೀಪಾಂಶು ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವರ್ಣ ನಾರಾಯಣಪ್ಪ ಹಾಗೂ ಇತರ ಇಬ್ಬರನ್ನು ಬ್ರೂಕ್‌ ಫೀಲ್ಡ್‌ ಆಸ್ಪತ್ರೆಗೆ ಸೇರಿಸಲಾಗಿದೆ, ಸ್ವರ್ಣ ನಾರಾಯಣಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್‌ ಕಮೀಷನರ್‌ ದಯಾನಂದ್‌ ಅವರು ಆಗಮಿಸಿದ್ದು ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಗಾಯಾಳುಗಳ ಸಂಬಂಧಿಕರು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ.

Share Post