BengaluruCrime

ಬಾಂಗ್ಲಾದ ಎಳೆ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ!

ಬೆಂಗಳೂರು(Bengaluru); ಬಾಂಗ್ಲಾದೇಶದಿಂದ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.. ಬೆಂಗಳೂರಿನ ಹೊಂಗಸಂದ್ರ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದಾಗ ಬಾಂಗ್ಲಾದೇಶದ ಇಬ್ಬರು ಅಪ್ರಾಪ್ತ ಬಾಲಕಿಯರು ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿರುವುದು ಗೊತ್ತಾಗಿದೆ.. ಕೂಡಲೇ ಸಿಸಿಬಿ ಪೊಲೀಸರು ಇಬ್ಬರೂ ಬಾಲಕಿಯರನ್ನು ರಕ್ಷಣೆ ಮಾಡಿದ್ದಾರೆ..

ಇದನ್ನೂ ಓದಿ; ಗಂಡ ತನ್ನಿಷ್ಟದ ತಿಂಡಿ ಮಾಡಲಿಲ್ಲ ಅಂತ ಹೆಂಡತಿ ಮಾಡಿದ್ದೇನು ಗೊತ್ತಾ..?

ಪ್ರಕರಣ ಸಂಬಂಧ ಮೂವರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಈ ದಾಳಿ ನಡೆಸಿದೆ.. ಬಂಧಿತರಲ್ಲಿ ಇಬ್ಬರು ಒರಿಸ್ಸಾದವರಾಗಿದ್ದು, ಮತ್ತೊಬ್ಬ ಸ್ಥಳೀಯ ಎಂದು ತಿಳಿದುಬಂದಿದೆ.. ಸೂರಜ್‌ ಸಾಹಜಿ, ಸುಬ್ರಹ್ಮಣ್ಯ ಶಾಸ್ತ್ರಿ ಹಾಗೂ ಕರಿಷ್ಮಾ ಶೇಖ್‌ ಎಂಬುವವರೇ ಬಂದಿತ ಆರೋಪಿಗಳಾಗಿದ್ದಾರೆ.. ಇದರಲ್ಲಿ ಸುಬ್ರಹ್ಮಣ್ಯ ಶಾಸ್ತ್ರಿ ಎಂಬಾತ ಸ್ಥಳೀಯನಾಗಿದ್ದು, ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಾನೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; ಪ್ರಿಯಾಂಕ್‌ ವಿರುದ್ಧದ ಸಿಎ ಸೈಟ್‌ ಮಂಜೂರು ಆರೋಪ; ಸರ್ಕಾರಕ್ಕೆ ರಾಜ್ಯಪಾಲರ ಪತ್ರ!

ಸಾಫ್ಟ್‌ವೇರ್‌ ಎಂಜಿನಿಯರ್‌ ಸುಬ್ರಹ್ಮಣ್ಯ ಶಾಸ್ತ್ರಿ ಅಪ್ರಾಪ್ತ ಹುಡುಗಿಯರು ಬೇಕು ಎಂದು ಬುಕ್‌ ಮಾಡಿದ್ದನಂತೆ.. ಹೀಗಾಗಿ ಇನ್ನಿತರ ಇಬ್ಬರು ಆರೋಪಿಗಳು ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಆತನ ಮನೆಗೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ.. ಈ ವಿಷಯ ತಿಳಿದ ಪೊಲೀಸರು ಏಕಾಏಕಿ ದಾಳಿ ಮಾಡಿದ್ದಾರೆ.. ವಿಚಾರಣೆ ನಡೆಸಿದಾಗಿ ಬಾಲಕಿಯರು ಬಾಂಗ್ಲಾದೇಶದವರು ಎಂದು ಗೊತ್ತಾಗಿದ್ದು, ಹೊಂಗಸಂದ್ರದ ಬಾಡಿಗೆ ಮನೆಯಲ್ಲಿಟ್ಟು ವೇಶ್ಯಾವಟಿಕೆ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ.. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ..

ಇದನ್ನೂ ಓದಿ; ಹಸುವಿನ ಮೇಲೆ ಆ್ಯಸಿಡ್, ಕಾದ ಎಣ್ಣೆ ಸುರಿದ ದುಷ್ಕರ್ಮಿಗಳು!

Share Post