Crime

ಸಂಪಾಜೆ ಬಳಿ ಹೊಳೆಗೆ ಉರುಳಿದ ಬಸ್:‌ ತಪ್ಪಿದ ಭಾರೀ ಅನಾಹುತ-ಗಾಯಾಳುಗಳು ಆಸ್ಪತ್ರೆಗೆ ದಾಖಲು

ಮಡಿಕೇರಿ: ಕೆಎಸ್‌ಅರ್‌ಟಿಸಿ ಬಸ್‌ ಸಣ್ಣ ಹೊಳೆಗೆ ಉರುಳಿ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆ ಬಳಿ ನಡೆದಿದೆ. ಧರ್ಮಸ್ಥಳದಿಂದ‌ ಗುಂಡ್ಲುಪೇಟೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ಹೊಳೆಗೆ ಉರುಳಿ ಬಿದ್ದ ಘಟನೆ ಸಂಪಾಜೆ ಬಳಿಯ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸದ್ಯ ಗಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಾಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಇಪ್ಪತ್ತೈದು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಎಲ್ಲರನ್ನು ಹತ್ತಿರದ ಸುಳ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post