CrimeDistricts

ಮೈಸೂರು ವಿದ್ಯಾರ್ಥಿಗಳಿದ್ದ ಬಸ್‌ ಶಿವಮೊಗ್ಗ ಬಳಿ ಪಲ್ಟಿ

ಶಿವಮೊಗ್ಗ; ಮೈಸೂರು ಜಿಲ್ಲೆಯ ವಿದ್ಯಾರ್ಥಿಗಳಿದ್ದ ಪ್ರವಾಸದ ಬಸ್‌ ಪಲ್ಟಿಯಾಗಿ 18 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸಾಗರ ತಾಲ್ಲೂಕಿನ ತುಮರಿ ಬಳಿ ನಡೆದಿದೆ. ಗಾಯಾಳುಗಳಲ್ಲಿ ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಹುಣಸೂರು ತಾಲ್ಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 60 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಸಿಗಂದೇಶ್ವರಿ ದರ್ಶನಕ್ಕೆ ಬಂದಿದ್ದಾಗ ತುಮರಿ ಬಳಿ ಬಸ್‌ ಪಲ್ಟಿಯಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Share Post