CrimeNational

ಟೈಯರ್‌ ಬ್ಲಾಸ್ಟ್‌ ಆಗಿ ಬಸ್‌ ಬೆಂಕಿಗಾಹುತಿ; 26 ಮಂದಿ ದುರ್ಮರಣ

ಮುಂಬೈ; ಮಹಾರಾಷ್ಟ್ರದಲ್ಲಿ ಭಾರಿ ದುರಂತ ಸಂಭವಿಸಿದೆ. ಟೈಯರ್‌ ಬ್ಲಾಸ್ಟ್‌ ಆಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಮಕ್ಕಳೂ ಸೇರಿ 26 ಮಂದಿ ಸಜೀವದಹನವಾಗಿದ್ದಾರೆ. ಮಹಾರಾಷ್ಟ್ರದ ಎಕ್ಸ್‌ಪ್ರೆಸ್‌ ವೇನಲ್ಲಿ ಇಂದು ಬೆಳಗಿನ ಜಾವ ಈ ದುರಂತ ನಡೆದಿದೆ.

ಬಸ್‌ ಮುಂಬೈನಿಂದ ಪುಣೆಗೆ ಹೋಗುತ್ತಿತ್ತು. ಬಸ್‌ನಲ್ಲಿ ಒಟ್ಟು 33 ಮಂದಿ ಇದ್ದು, ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲರೂ ಸುಟ್ಟು ಕರಕಲಾಗಿದ್ದಾರೆ. ಉಳಿದ ಏಳು ಮಂದಿ ಬದುಕುಳಿದಿದ್ದಾರೆ. ಇದರಲ್ಲಿ ಕೆಲವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಬುಲ್ಧಾನಾ ಬಳಿ ಬಸ್‌ನ ಟೈಯರ್‌ ಬ್ಲಾಸ್ಟ್‌ ಆಗಿದ್ದು, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

Share Post