CrimeHealthNational

ಕರ್ನಾಟಕದ ಅಯ್ಯಪ್ಪ ಭಕ್ತರಿಂದ ಬಸ್‌ ಡಿಕ್ಕಿ; ಐದು ಮಂದಿ ದುರ್ಮರಣ!

ಮಲಪ್ಪುರಂ; ಕರ್ನಾಟಕದಿಂದ ಹೋಗಿದ್ದ ಅಯ್ಯಪ್ಪ ಭಕ್ತರಿದ್ದ ಬಸ್‌ ಆಟೋ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕೇರಳದ ಮಲಪ್ಪುರಂನಲ್ಲಿ ಈ ದುರ್ಘಟನೆ ನಡೆದಿದೆ. ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕರ್ನಾಟದಿಂದ ಹೋಗಿದ್ದ ಬಸ್‌ ಶಬರಿಮಲೆಗೆ ತೆರಳುತ್ತಿತ್ತು. ಕೊಯಿಲಂಡಿ-ಮಂಜೇರಿ ಮಾರ್ಗದಲ್ಲಿ ಹೋಗುತ್ತಿದ್ದಾಗ ಬಸ್‌ ಆಟೋಗೆ ಡಿಕ್ಕಿ ಹೊಡೆದಿದೆ. ಮೃತರೆಲ್ಲರೂ ಆಟೋದಲ್ಲಿ ಪ್ರಯಾಣಿಸುತ್ತಿದ್ದವರು ಎಂದು ತಿಳಿದುಬಂದಿದೆ.

ಆಟೋ ಡ್ರೈವರ್ ಅಬ್ದುಲ್ ಮಜೀದ್, ಪ್ರಯಾಣಿಕರಾದ ಮುಹ್ಸಿನಾ, ಥಸ್ನೀಮ್, ರಿಯಾಜ್ ಮೃತಪಟ್ಟಿದ್ದಾರೆ. ಇನ್ನಿಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

 

Share Post