CrimeDistricts

ಚೇಳೂರು ಬಳಿ ಬಸ್‌ ಪಲ್ಟಿ; ಮೂವರು ದುರ್ಮರಣ, ಏಳು ಮಂದಿ ಸ್ಥಿತಿ ಚಿಂತಾಜನಕ!

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ಬಳಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7-8 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬಸ್‌ ಅತಿವೇಗವಾಗಿ ಚಲಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ.

ಚೇಳೂರು ಸಮೀಪದ ಕೊಳ್ಳವಾರಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೊದಲಿಗೆ ಮರಕ್ಕೆ ಡಿಕ್ಕಿ ಹೊಡೆದ ಬಸ್‌ ಅನಂತರ ಉರುಳಿಬಿದ್ದಿದೆ. ಬಸ್ಸಿನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

 

Share Post