CrimeNational

ಭಾರತ್‌ ಜೋಡೋ ಯಾತ್ರೆ ವೇಳೆ ಹೃದಯಾಘಾತ; ಸಂಸದ ಸಂತೋಖ್‌ ಸಿಂಗ್‌ ಸಾವು

ಚಂಡೀಗಢ; ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾದಯಾತ್ರೆ ಮಾಡುತ್ತಿದ್ದ ಸಂಸದ ಸಂತೋಖ್‌ ಸಿಂಗ್‌ ಚೌಧರಿ ನಿಧನರಾಗಿದ್ದಾರೆ. ಪಾದಯಾತ್ರೆ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇಂದು ಮುಂಜಾನೆ ಪಂಜಾಬ್‌ನ ಜಲಂಧರ್‌ ಬಳಿ ಪಾತ್ರೆ ತೆರಳುತ್ತಿತ್ತು. ಈ ವೇಳೆ ಸಂತೋಖ್‌ ಸಿಂಗ್‌ ಅವರು ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಇಂದಿನ ಭಾರತ್‌ ಜೋಡಿ ಯಾತ್ರೆಯನ್ನು ಮೊಟಕುಗೊಳಿಸಲಾಯಿತು. ರಾಹುಲ್‌ ಗಾಂಧಿಯವರು ಫಗ್ವರ್‌ ಆಸ್ಪತ್ರೆಗೆ ತೆರಳಿ ವೈದ್ಯರು ಹಾಗೂ ಮೃತರ ಕುಟುಂಬದವರ ಜೊತೆ ಮಾತುಕತೆ ನಡೆಸಿದರು.

Share Post