BengaluruCrime

ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ದೂರು

ಬೆಂಗಳೂರು; ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಾಣಸ್ವಾಮಿಯವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಛಲವಾದಿ ನಾರಾಯಣಸ್ವಾಮಿಯವರು ಇತ್ತೀಚೆಗೆ ಚಡ್ಡಿ ಹೊತ್ತು ಪ್ರತಿಭಟನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್‌ ಮಾಡಿದ್ದ ಸಿದ್ದರಾಮಯ್ಯ, ಆರ್‌ಎಸ್‌ಎಸ್‌ ಉನ್ನತ ಸ್ಥಾನಕ್ಕೆ ನೀನು ಸದಾ ಅಸ್ಪೃಶ್ಯ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಛಲವಾದಿ ನಾರಾಯಾಣಸ್ವಾಮಿಯವರು ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಆರ್‌ಎಸ್‌ಎಸ್‌ ಚಡ್ಡಿ ಸುಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸಕ್ಕೆ ಚಡ್ಡಿಗಳನ್ನು ಕಳುಹಿಸಲು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ಚಡ್ಡಿಗಳನ್ನು ಸಂಗ್ರಹಿಸಿದ್ದರು. ಪ್ರತಿಭಟನೆಯ ಭಾಗವಾಗಿ ಛಲವಾದಿ ನಾರಾಯಣಸ್ವಾಮಿ ಚಡ್ಡಿಗಳನ್ನು ಹೊತ್ತಿದ್ದರು. ಇದಕ್ಕೆ ಸಿದ್ದರಾಮಯ್ಯ ವ್ಯಂಗ್ಯ ಮಾಡಿ ಟ್ವೀಟ್‌ ಮಾಡಿದ್ದರು. ಸಿದ್ದರಾಮಯ್ಯ ಟ್ವೀಟ್‌ ಅಟ್ರಾಸಿಡಿ ಕೇಸ್‌ನಡಿ ಬರುತ್ತದೆ. ಹೀಗಾಗಿ ಅವರನ್ನು ಬಂಧಿಸಿ ನನಗೆ ನ್ಯಾಯ ದೊರಕಿಸಿಕೊಡಬೇಕೆಂದು ಛಲವಾದಿ ನಾರಾಯಾಣಸ್ವಾಮಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯನವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ನಮ್ಮ ಪಕ್ಷದ ಬಗ್ಗೆ ಏನು ಬೇಕಾದರೂ ಮಾತನಾಡಲಿ. ಆದ್ರೆ ನಿಮ್ಮ ಗುಲಾಮ ಮನಸ್ಥಿತಿಗೆ ನನ್ನ ದಿಕ್ಕಾರ ಎಂದು ಹೇಳಿದ್ದಾರೆ. ಹೀಗಾಗಿ ನಾನು ಕೇಸ್‌ ದಾಖಲಿಸಿದ್ದೇನೆ ಎಂದು ಹೇಳಿದ್ದಾರೆ.

Share Post