CrimeNationalPolitics

ಒಂದು ಪ್ರಕರಣದಲ್ಲಿ ಚಂದ್ರಬಾಬು ನಾಯ್ಡುಗೆ ನಿರೀಕ್ಷಣಾ ಜಾಮೀನು

ಅಮರಾವತಿ; ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಒಂದು ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ನೀಡಿದೆ. ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣ ಸಂಬಂಧ ಜಾಮೀನು ಮಂಜೂರು ಮಾಡಲಾಗಿದೆ. ನಾಯ್ಡು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧ ಅಕ್ಟೋಬರ್ 16ರವರೆಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ನೀಡಲಾಗಿದೆ.

ಇನ್ನು ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ನಾಳೆಯವರೆಗೆ ಯಾರನ್ನೂ ಬಂಧಿಸದಂತೆ ಸಿಐಡಿಗೆ ನ್ಯಾಯಾಲಯ ಸೂಚನೆ ನೀಡಿದೆ. ಸಿಐಡಿ ವಿಜಯವಾಡ ಎಸಿಬಿ ನ್ಯಾಯಾಲಯ ಸಲ್ಲಿಸಿದ್ದ ಇನ್ನರ್ ರಿಂಗ್ ರೋಡ್ ಅರ್ಜಿಗೆ ಹೈಕೋರ್ಟ್ ತಡೆ ನೀಡಿದೆ. ಈ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಯನ್ನು ಡೀಮ್ಡ್ ಕಸ್ಟಡಿ ಆಧಾರದ ಮೇಲೆ ತಿರಸ್ಕರಿಸಲಾಗಿದೆ.

Share Post