CrimeDistricts

ಚಂದ್ರು ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ; ಶಾಸಕ ರೇಣುಕಾಚಾರ್ಯ

ದಾವಣಗೆರೆ: ನನ್ನ ತಮ್ಮನ ಮಗ ಚಂದ್ರಶೇಖರ್ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಪೊಲೀಸರು ನೂರಾರು ಕಾರುಗಳಲ್ಲಿ ಓಡಾಡಿದರು. ಆದ್ರೆ ನನ್ನ ಮಗನನ್ನು ಪತ್ತೆ ಮಾಡಿದ್ದು ನನ್ನ ಕ್ಷೇತ್ರದ ಜನ ಎಂದು ಹೇಳಿದ್ದಾರೆ.

ನಿನ್ನೆ ಒಬ್ಬ ಪೊಲೀಸ್‌ ಅಧಿಕಾರಿ ಬಂದು ಓವರ್ ಸ್ಪೀಡ್ ನಲ್ಲಿ ಬಂದು ಬಿದ್ದಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಚಂದ್ರು ಕೈಗೆ ಯಾರು ಹಗ್ಗ ಕಟ್ಟಿದ್ದರು ಎಂದು ಶಾಸಕ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಪೊಲೀಸರ ನಿರ್ಲಕ್ಷ್ಯ ಇದರಲ್ಲಿ ಎದ್ದು ಕಾಣುತ್ತದೆ. ಆ ಅಧಿಕಾರಿ ಕನಿಷ್ಟ ಪಕ್ಷ ನನ್ನ ಬಳಿಯಾದರೂ ಮಾಹಿತಿ ಕೇಳಬಹುದು. ನನ್ನ ಬಳಿಯೂ ಮಾಹಿತಿ ಪಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share Post