Crime

ಕೈಗಾರಿಕಾ ಭದ್ರತಾ ಪಡೆ ಅಧಿಕಾರಿ ಹಣೆಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಕೋಲ್ಕತ್ತ; ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಸಿಐಎಸ್‌ಎಫ್‌ ಸಬ್ ಇನ್‌ಸ್ಪೆಕ್ಟರ್ ಪಂಕಜ್ ಕುಮಾರ್ ಎಂದು (35) ಗುರುತಿಸಲಾಗಿದೆ. ಕೋಲ್ಕತ್ತ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯದ ವೇಳೆಯೇ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಮಾನ ನಿಲ್ದಾಣದ ಬೇಸ್‌ಮೆಂಟ್‌ನ ಶೌಚಾಲಯದ ಮುಂದೆ ಶನಿವಾರ ಬೆಳಿಗ್ಗೆ 7.45ರ ಸುಮಾರು ಪಂಕಜ್ ಕುಮಾರ್ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಶೌಚಾಲಯವೆಲ್ಲ ರಕ್ತದಿಂದ ತುಂಬಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣದ ಒಳಗೆ ಇಂತಹ ಘಟನೆ ನಡೆದರೂ ಪ್ರಯಾಣಿಕರಿಂದ ದೂರ ಘಟನೆ ಸಂಭವಿಸಿರುವುದರಿಂದ ವಿಮಾನಗಳ ಓಡಾಟಕ್ಕೆ ಯಾವುದೇ ಅಡಚಣೆಯುಂಟಾಗಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

 

Share Post