CrimeNational

ಹತ್ತನೇ ತರಗತಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಗಂಭೀರ ಗಾಯಗಳಿಂದ ಓರ್ವ ವಿದ್ಯಾರ್ಥಿ ಸಾವು

ಹೈದರಾಬಾದ್:‌ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಗಟನೆ ಹೈದರಾಬಾದ್‌ನ ಕೃಷ್ಣ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಸಾಯಿಕೃಪಾ ಎಂಬ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ನಡುವೆ ಮಾರಾಮಾರಿಯಾಗಿದೆ. ಒಂದು ಗುಂಪು ಪೇಪರ್‌ ಬಾಲ್‌ನಲ್ಲಿ ಕ್ರಿಕೆಟ್‌ ಆಟ ಆಡಿದ್ದಾರೆ. ಈ ವೇಳೆ ಮತ್ತೋರ್ವ ವಿದ್ಯಾರ್ಥಿಗೆ ಬಾಲ್‌ ತಗುಲಿದೆ. ಈ ವಿಚಾರಕ್ಕೆ ಎರಡು ಗುಂಪುಗಳ ಮಾತಿನ ಚಕಮಕಿ ನಡೆದಿದೆ.

ವಾಗ್ವಾದ ತಾರಕಕ್ಕೇರಿ ಎರಡೂ ಗುಂಪುಗಳು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ನಡುವೆ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದ್ರೆ ಗಂಭೀರ ಗಾಯಗಳಾದ ಕಾರಣ ದಾರಿ ಮಧ್ಯದಲ್ಲೇ ಮನ್ಸೂರ್‌ ಎಂಬ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಘಟನೆ ಸಂಬಂಧ ಜೂಬ್ಲಿ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share Post