BengaluruCrime

5 ಕೆಜಿ ಚಿನ್ನ ದರೋಡೆ ಪ್ರಕರಣ; 7 ಖದೀಮರ ಬಂಧನ

ಬೆಂಗಳೂರು : ಲಾಂಗ್‌ ತೋರಿಸಿ 5 ಕೆಜಿ ಚಿನ್ನ ದರೋಡೆ ಮಾಡಿದ್ದ ಏಳು ಆರೋಪಿಗಳನ್ನು ಬೆಂಗಳೂರಿನ ಹಲಸೂರು ಗೇಟ್‌ ಪೊಲೀಸರು ಬಂಧಿಸಿದ್ದಾರೆ. ನವಂಬರ್ 19ರಂದು ಅಟ್ಟಿಕಾ ಗೋಲ್ಡ್ ಕಂಪನಿಯಲ್ಲಿ ಸಂಸ್ಕಾರ್ ಎಂಟರ್ಪ್ರೈಸಸ್ ಮಾಲೀಕ ಚಿನ್ನದ ಗಟ್ಟಿಗಳನ್ನು ಖರೀದಿಸಿ ವಾಪಸ್ಸಾಗುತ್ತಿದ್ದರು. ಈ ವೇಳೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ ಹೋಟೆಲ್ ಹತ್ತಿರ ಸಿನಿಮೀಯ ರೀತಿಯಲ್ಲಿ ಬಂದ 7 ದರೋಡೆಕೋರರು, ಲಾಂಗ್ ತೋರಿಸಿ 5 ಕೆಜಿ ಚಿನ್ನ ಕಿತ್ತುಕೊಂಡು ಪರಾರಿಯಾಗಿದ್ದರು.

     ದೂರು ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಪೊಲೀಸರು, ಆರೋಪಿಗಳಾದ ಮೊಹಮ್ಮದ್ ಪರಾನ್, ಹಂಜುಮ್, ಮೊಹಮ್ಮದ್ ಹುಸೇನ್, ಮೊಹಮ್ಮದ್ ಅರಿಫ್, ಸೊಹೈಲ್ ಬೇಗ್, ಶಾಹಿದ್ ಅಹ್ಮದ್ ಹಾಗೂ ಉಮೇಶ್ ಎನ್ನುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Share Post