CrimeDistricts

ಮಹಾರಾಷ್ಟ್ರದ ನಾಯಕರು ಬೆಳಗಾವಿ ಪ್ರವೇಶ ಮಾಡದಂತೆ ಜಿಲ್ಲಾಧಿಕಾರಿ ನಿರ್ಬಂಧ

ಬೆಳಗಾವಿ; ನಾಳೆ ಡಿ.6 ರಂದು ಮಹಾರಾಷ್ಟ್ರದ ಸಚಿವರು, ಸಂಸದರು ಬೆಳಾಗಾವಿಯಲ್ಲಿ ಸಭೆ ನಡೆಸಲು ಮುಂದಾಗಿದ್ದಾರೆ. ಆದ್ರೆ ಇದಕ್ಕೆ ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ಇರುವುದರಿಂದ, ಮಹಾ ನಾಯಕರ ಬೆಳಗಾವಿ ಭೇಟಿಗೆ ನಿರ್ಬಂಧ ಹೇರಲಾಗಿದೆ.

ಮಹಾರಾಷ್ಟ್ರದ ನಾಯಕರು ಬೆಳಗಾವಿ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿತೇಶ್​​ ಪಾಟೀಲ್ ನಿಷೇಧ ಹೇರಿದ್ದಾರೆ. ಸಿಆರ್​​ಪಿಸಿ 1973 ಕಲಂ 144(3)ರ ಅನ್ವಯ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

Share Post