CrimeDistricts

ಬಸ್‌ ಘಟಕದಲ್ಲೇ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ

ಕಲಬುರಗಿ; ಸೇಡಂ ಪಟ್ಟಣದ ಚಿಂಚೋಳಿ ರಸ್ತೆಯಲ್ಲಿರುವ ಬಸ್ ಘಟಕದಲ್ಲಿ ಚಾಲಕ ಕಂ ನಿರ್ವಾಹಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಫಜಲಪುರ ತಾಲ್ಲೂಕಿನ ಗುಡೂರ ಗ್ರಾಮದ ಭೀಮಾಶಂಕರ (45) ಆತ್ಮಹತ್ಯೆ ಮಾಡಿಕೊಂಡ ನೌಕರ ಎಂದು ತಿಳಿದುಬಂದಿದೆ.

ತಲೆ ಹಾಗೂ ಮುಖಕ್ಕೆ ಟವೆಲ್ ಮುಚ್ಚಿಕೊಂಡು ತಂತಿಯನ್ನು ಕೊರಳಿಗೆ ಸುತ್ತಿಕೊಂಡು ಭೀಮಾಶಂಕರ ನೇಣಿಗೆ ಕೊರಳೊಡ್ಡಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಚಿಂಚೋಳಿಯಿಂದ ಸೇಡಂ ಘಟಕಕ್ಕೆ ವರ್ಗಾವಣೆಯಾಗಿ ಬಂದಿದ್ದರು. ಸ್ಥಳಕ್ಕೆ ಸಿಪಿಐ ಆನಂದರಾವ್, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ‌ ನೀಡಿದ್ದಾರೆ.

Share Post