CrimeNational

ಅಕ್ರಮ ಹಣ ವರ್ಗಾವಣೆ ಪ್ರಕರಣ; ಡಿಕೆಶಿ ವಿರುದ್ಧದ ಕೇಸ್‌ ಸೆ.27ಕ್ಕೆ ಮುಂದೂಡಿಕೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ. ಪ್ರಕರಣ ಮೂವರು ಆರೋಪಿಗಳು, ಚಾರ್ಜ್‌ಶೀಟ್‌ ಕನ್ನಡ ತರ್ಜುಮೆ ನೀಡಬೇಕೆಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ಆರೋಪಿಗಳಾದ ಸಚಿನ್ ನಾರಾಯಣ್, ಸುನೀಲ್ ಶರ್ಮಾ, ರಾಜೇಂದ್ರ. ಎನ್ ಎಂಬುವವರು ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿ ನೀಡಲು ಸೂಚಿಸುವಂತೆ ಕೋರ್ಟ್‌ಗೆ ಮನವಿ ಮಾಡಿದರು.  ಇದಕ್ಕೆ ಅಸ್ತು ಎಂದ ಇಡಿ ಪರ ವಕೀಲರು, ತರ್ಜುಮೆ ಮಾಡಿ ದಾಖಲೆಗಳನ್ನು ನೀಡಲು ನಾಲ್ಕೈದು ವಾರಗಳ ಸಮಯಬೇಕು ಎಂದು ಹೇಳಿದರು. ಆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ಪ್ರಕರಣದಲ್ಲಿ ಈಗಾಗಲೇ ಜಾಮೀನು ಸಿಕ್ಕಿದೆ. ಅದಾಗ್ಯೂ ನ್ಯಾಯಾಲಯಕ್ಕೆ ಗೌರವ ಕೊಟ್ಟು ಕೋರ್ಟ್‍ಗೆ ಹಾಜರಾಗಿದ್ದೆ. ಇತರೆ ಆರೋಪಿಗಳು ದಾಖಲೆಗಳನ್ನು ಕೇಳಿದ್ದಾರೆ. ಅವುಗಳನ್ನು ಕೊಟ್ಟ ಬಳಿಕ ಮುಂದೆ ನೋಡಿಕೊಂಡು ಮಾತನಾಡುತ್ತೇನೆ ಎಂದರು.

Share Post