CrimeNational

ಕಾರು-ಟ್ರಕ್‌ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ 10 ಮಂದಿ ದುರ್ಮರಣ

ಅಹಮದಾಬಾದ್‌; ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ದುರಂತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ.. ಕಾರು – ಟ್ರಕ್‌ ನಡುವೆ ಡಿಕ್ಕಿಯಾಗಿ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ.. ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದರೆ, ಉಳಿದಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ; ಬಿಜೆಪಿ ನೇತೃತ್ವದ ಎನ್‌ಡಿಎಗೆ 220 ಸೀಟು ಅಷ್ಟೇನಾ ಬರೋದು..?

ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ ವೇನಲ್ಲಿ ಈ ದುರಂತ ನಡೆದಿದೆ.. ಅಪಘಾತದ ವೇಳೆ ಕಾರು ಚಾಲಕ ಸುರೇಂದ್ರ ಸಿಂಗ್ ರಾವತ್ ಹಾಗೂ ಕಾರಿನಲ್ಲಿದ್ದ ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದರು.. ಆದ್ರೆ, ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.. ಕಾರು ಚಾಲಕನ ಅಜಾಗರೂಕತೆ ಚಾಲನೆ ಹಾಗೂ ಅತಿ ವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ..

ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.. ಇದರಲ್ಲಿ ದಾಖಲಾಗಿರುವ ಪ್ರಕಾರ ಕಾರು ಚಾಲಕ ಮುಂದೆ ಬರುತ್ತಿದ್ದ ಟ್ರಕ್‌ ಗಮನಿಸದೇ ಅತಿ ವೇಗವಾಗಿ ಚಾಲನೆ ಮಾಡಿದ್ದಾನೆ. ಇದರಿಂದಾಗಿ ಮುಖಾಮುಖಿ ಡಿಕ್ಕಿಯಾಗಿದೆ..

ಇದನ್ನೂ ಓದಿ; ಈ ಏಳು ಲಕ್ಷಣಗಳಿದ್ದರೆ ನಿಮ್ಮ ಕಣ್ಣುಗಳು ಹಾಳಾಗುತ್ತಿವೆ ಎಂದರ್ಥ..!

ಗುಜರಾತ್​​ನ ನಾಡಿಯಾಡ್ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ..

ಇದನ್ನೂ ಓದಿ; ದರ್ಶನ್ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶ; ಪವಾಡವೆಂಬಂತೆ ಪಾರು!

 

Share Post