CrimeNationalSports

ಮೀರತ್‌ನಲ್ಲಿ ಭೀಕರ ಅಪಘಾತ; ಮಾಜಿ ಕ್ರಿಕೆಟಿಗ ಪ್ರವೀಣ್‌ ಕುಮಾರ್‌ ಪಾರು

ಲಕ್ನೋ; ಮೀರತ್‌ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್‌ ಕುಮಾರ್‌ ಹಾಗೂ ಅವರ ಪುತ್ರ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ಟ್ರಕ್‌ ಒಂದು ಪ್ರವೀಣ್‌ ಕುಮಾರ್‌ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ನಡೆದಿದೆ.

ವೇಗದಿಂದ ಬಂದು ಡಿಕ್ಕಿ ಹೊಡೆದಿದ್ದರಿಂದ ಪ್ರವೀಣ್‌ ಕುಮಾರು ಅವರು ಪ್ರಯಾಣಿಸುತ್ತಿದ್ದ ಕಾರು ನಜ್ಜುಗುಜ್ಜಾಗಿವೆ. ಆದ್ರೆ ಕಾರಿನಲ್ಲಿದ್ದ ಪ್ರವೀಣ್‌ ಕುಮಾರ್‌ ಹಾಗೂ ಅವರ ಮಗ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಪೊಲೀಸರು ಟ್ರಕ್‌ ಚಾಲಕನನ್ನು ಬಂಧಿಸಿದ್ದಾರೆ.

Share Post