CrimeDistricts

ಹುಬ್ಬಳ್ಳಿಯಲ್ಲಿ ಮತ್ತೊಂದು ದಾರುಣ; ಯುವತಿಯ ಬರ್ಬರ ಹತ್ಯೆ

ಹುಬ್ಬಳ್ಳಿ; ವಿದ್ಯಾರ್ಥಿನಿ ನೇಹಾ ಹಿರೇಮಠ್ ಬರ್ಬರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್ ಆಗಿದೆ.. ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಯಾಗಿದೆ‌. ಮನೆಯಲ್ಲಿ ಮಲಗಿದ್ದ ವೇಳೆ ಗಿರೀಶ್ ಸಾವಂತ್ ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಆತ ಓಡಿ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

  ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ಪ್ರಕರಣ ನಡೆದಿದೆ. ಈಗಾಗಲೇ ಆರೋಪಿ ಗಿರೀಶ್ ಸಾವಂತ ಪತ್ತೆಗೆ ಬಲೆ ಬೀಸಲಾಗಿದೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂದು ತನಿಖೆಯಲ್ಲಿ ಗೊತ್ತಾಗಲಿದೆ. ಮುಂದಿನ ಮಾಹಿತಿಯನ್ನ ತನಿಖೆಯ ನಂತರ ತಿಳಿಸಲಾಗುವುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಅವರು ತಿಳಿಸಿದ್ದಾರೆ.

Share Post