BengaluruCrime

ಎಸ್.ಆರ್‌.ವಿಶ್ವನಾಥ್‌ ಹತ್ಯೆಗೆ ಸ್ಕೆಚ್‌ ಕೇಸ್‌; ಗೋಪಾಲಕೃಷ್ಣಗೆ ಜಾಮೀನು

ಬೆಂಗಳೂರು: ಶಾಸಕ ಎಸ್‌.ಆರ್‌.ವಿಶ್ವನಾಥ್‌ ಹತ್ಯೆಗೆ ಸ್ಕೆಚ್‌ ಹಾಕಿದ ಪ್ರಕರಣದ ಆರೋಪಿ  ಗೋಪಾಲಕೃಷ್ಣಗೆ 2ನೇ ಎಸಿಜೆಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಬೆಳಗ್ಗೆಯಷ್ಟೇ ವಿಚಾರಣೆಗೆ ಹಾಜರಾಗುವಂತೆ ರಾಜಾನುಕುಂಟೆ ಪೊಲೀಸರು ನೋಟಿಸ್‌ ನೀಡಿದ್ದರು. ಈ ಬೆನ್ನಲ್ಲೇ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇನ್ನು ಗೋಪಾಲಕೃಷ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ ಒಂದಷ್ಟು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ತನಿಖೆ ಮುಗಿಯುವವರೆಗೂ ಬೆಂಗಳೂರು ನಗರ ಬಿಟ್ಟು ಹೋಗಬಾರದು. ವಿಚಾರಣೆಗೆ ಕರೆದಾಗ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.

Share Post