CrimeNational

ಸೇನಾ ಹೆಲಿಕಾಪ್ಟರ್‌ ದುರಂತ ಪ್ರಕರಣ; ಕಾಸರಗೋಡು ಸೈನಿಕ ಸಾವು

ಕಾಸರಗೋಡು; ನಿನ್ನೆ ಅರುಣಾಚಲ ಪ್ರದೇಶದ ದುರ್ಗಮ ಏರಿಯಾದಲ್ಲಿ ಸೇನಾ ಹೆಲಿಕಾಪ್ಟರ್‌ ಪತನವಾಗಿತ್ತು. ಅದರಲ್ಲಿದ್ದ ನಾಲ್ವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು. ಸಾವನ್ನಪ್ಪಿದ ನಾಲ್ವರು ಸೈನಿಕರಲ್ಲಿ ಕಾಸರಗೋಡು ಜಿಲ್ಲೆಯ ಒಬ್ಬ ಸೈನಿಕರಿದ್ದಾರೆ. ಚೆರುವತ್ತೂರು ಕಿಳಕ್ಕೇಮುರಿ ಗ್ರಾಮದ ಕೆ.ವಿ.ಅಶ್ವಿನ್ ಸಾವನ್ನಪ್ಪಿದ ಸೈನಿಕ.

ಹುತಾತ್ಮ ಸೈನಿಕ ಅಶ್ವಿನ್‌ ಅವರು ಕಿಳಕ್ಕೇಮುರಿ ಗ್ರಾಮದ ಕಟ್ಟಡ ನಿರ್ಮಾಣ ಕಾರ್ಮಿಕ ಅಶೋಕನ್-ಕೆ.ವಿ.ಕೌಸಲ್ಯ ದಂಪತಿ ಪುತ್ರ ಎಂದು ತಿಳಿದುಬಂದಿದೆ. ಅಶ್ವಿನ್‌ ಅವರು ನಾಲ್ಕು ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಅಂಡ್ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಂಜಿನಿಯರ್ ಆಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದರು. ರಜೆಗೆ ಊರಿಗೆ ಬಂದಿದ್ದ ಅಶ್ವಿನ್ ಕಳೆದ ತಿಂಗಳಷ್ಟೇ ಕರ್ತವ್ಯಕ್ಕೆ ಮರಳಿದ್ದರು ಎಂದು ತಿಳಿದುಬಂದಿದೆ.

Share Post