CrimeDistricts

ಸಾಹಿತಿಗಳಿಗೆ ಜೀವ ಬೆದರಿಕೆ; ಹಿಂದೂಪರ ಕಾರ್ಯಕರ್ತ ಅರೆಸ್ಟ್

ಬೆಂಗಳೂರು; ಕಳೆದ ಎರಡು ವರ್ಷಗಳಿಂದ ನಾಡಿನ ಹಕವು ಸಾಹಿತಿಗಳಿಗೆ ಅನಾಮಧೇಯ ಪತ್ರ ಬರೆದು ಜೀವ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿ, ಶಿವಾಜಿ ರಾವ್ ಜಾಧವ್ ಎಂಬಾತನನ್ನ ಬಂಧಿಸಲಾಗಿದೆ.

 

ಆರೋಪಿ ಶಿವಾಜಿರಾವ್ ಜಾಧವ್ ಹಿಂದೂಪರ ಸಂಘಟನೆಯೊಂದರ ಸಂಚಾಲಕ ಎಂದು ತಿಳಿದುಬಂದಿದೆ. ಈತ ಕಳೆದ ಎರಡು ವರ್ಷಗಳಿಂದ ತನ್ನ ಕೈಬರಹದಿಂದಲೇ ಕೊಲೆ ಬೆದರಿಕೆ ಪತ್ರ ಬರೆದು ಸಾಹಿತಿಗಳಿಗೆ ಕಳುಹಿಸುತ್ತಿದ್ದ. ದಾವಣಗೆರೆ ಸೇರಿದಂತೆ ಹಲವು ಕಡೆಯಿಂದ ಪೋಸ್ಟ್ ಮಾಡುತ್ತಿದ್ದ.

 

ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಸಾಹಿತಿಗಳಿಗೆ ಬೆದರಿಕೆ ಪತ್ರ ಕಳುಹಿಸಲಾಗಿತ್ತು. ಇವರು ನೀಡಿದ ದೂರಿನ‌ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಪತ್ರದಲ್ಲಿ ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದೆಲ್ಲಾ ಬರೆಯುತ್ತಿದ್ದ ಎನ್ನಲಾಗಿದೆ.

 

ಈ ಸಂಬಂಧ ರಾಜ್ಯದ ಏಳು ಕಡೆ ಕೇಸ್ ದಾಖಲಾಗಿತ್ತು. ಈ ಎಲ್ಲಾ ಪ್ರಕರಣಗಳನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.

 

Share Post