CrimeDistricts

ಮೈಸೂರು ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆ; ಅಪ್ತಾಪ್ತ ಮಗಳನ್ನು ಹೆತ್ತವರೇ ಕೊಂದರು..!

ಮೈಸೂರು; ಎರಡನೇ ಪಿಯುಸಿ ಓದುತ್ತಿದ್ದ ಮಗಳು ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದಳೆಂಬ ಕಾರಣಕ್ಕಾಗಿ, ಆಕೆಯನ್ನು ಹೆತ್ತ ತಂದೆ ತಾಯಿಯೇ ದಾರುಣವಾಗಿ ಕೊಲೆ ಮಾಡಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ತಂದೆ-ತಾಯಿಯೇ ಮಗಳನ್ನು ಕೊಂದು ನಂತರ ಮೃತದೇಹವನ್ನು ಜಮೀನೊಂದರಲ್ಲಿ ಎಸೆದಿದ್ದರು. ಸ್ಥಳೀಯರಿಗೆ ಮೃತದೇಹ ಕಾಣಿಸಿದ್ದರಿಂದ ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು. ಪೊಲೀಸರು ಬಾಲಕಿ ಶಾಲಿನಿ ತಂದೆ ಸುರೇಶ್‌ ಹಾಗೂ ತಾಯಿ ಬೇಬಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ತಮಗೆ ಅವಮಾನ ಮಾಡಿದಕ್ಕೆ ಮಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಗೀಡಾದ ಅಪ್ರಾಪ್ತ ಬಾಲಕಿ ಶಾಲಿನಿ ಪಕ್ಕದ ಗ್ರಾಮದ ಮೆಲ್ಲಹಳ್ಳಿಯ ಯುವಕ ಮಂಜು ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಪ್ರೀತಿಗೆ ಶಾಲಿನಿ ಪೋಷಕರು ವಿರೋಧಿಸಿದ್ದರು. ಪ್ರೇಮಿಗಳು ಮದುವೆಯಾಗಲು ನಿರ್ಧರಿಸಿದ್ದರು. ಪ್ರಿಯಕರನಿಗಾಗಿ ಶಾಲಿನಿ ಮನೆ ಬಿಟ್ಟಿದ್ದಳು. ಇದೇ ವಿಚಾರ ಪೊಲೀಸ್ ಠಾಣೆ ಮೆಟ್ಟಲೇರಿತ್ತು. ಪೊಲೀಸರ ಮುಂದೆ ಶಾಲಿನಿ ಮನೆಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು. ಹೀಗಾಗಿ ಶಾಲಿನಿಯನ್ನು ಬಾಲಮಂದಿರಕ್ಕೆ ಸೇರಿಸಲಾಗಿತ್ತು. ಇತ್ತೀಚೆಗಷ್ಟೆ ಮಗಳನ್ನು ಪೋಷಕರಾದ ಸುರೇಶ್ ಹಾಗೂ ಬೇಬಿ ಮನೆಗೆ ಕರೆ ತಂದಿದ್ದರು.

 

Share Post