CrimeNational

ಅಕ್ರಮ ಹಣ ವರ್ಗಾವಣೆ ಪ್ರಕರಣ; ನಾಳೆ ಇಡಿ ಕೋರ್ಟ್‌ ಮುಂದೆ ಡಿಕೆಶಿ ಹಾಜರು

ನವದೆಹಲಿ; ಅಕ್ರಮ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನಾಳೆ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಲಿದ್ದಾರೆ. ಇಡಿ ಅಧಿಕಾರಿಗಳು ಇತ್ತೀಚೆಗೆ ಈ ಪ್ರಕರಣ ಚಾರ್ಜ್‌ ಶೀಟ್‌ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ರೆಗ್ಯುಲರ್‌ ಬೇಲ್‌ ಪಡೆಯುವ ಅವಶ್ಯಕತೆ ಇದೆ. ಹೀಗಾಗಿ ನಾಳೆ ಅವರು ಕೋರ್ಟ್‌ಗೆ ಹಾಜರಾಗುತ್ತಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರು ಸದ್ಯ ಮಧ್ಯಂತರ ಜಾಮೀನು ಪಡೆದಿದ್ದಾರೆ. ಆದ್ರೆ ಇಡಿ ಅಧಿಕಾರಿಗಳು ಚಾರ್ಜ್‌ ಶೀಟ್‌ ಸಲ್ಲಿಸಿರುವುದರಿಂದ ಈಗ ರೆಗ್ಯುಲರ್‌ ಬೇಲ್‌ ಪಡೆಯಲೇಬೇಕಾಗಿದೆ. ಈ ಸಂಬಂಧ ಅವರು ಬೇಲ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ನಡೆದ ವಿಚಾರಣೆ ವೇಳೆ ರೆಗ್ಯುಲರ್‌ ಬೇಲ್‌ ನೀಡೋದಕ್ಕೆ ಇಡಿ ಅಧಿಕಾರಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಕೋರ್ಟ್‌ ಮತ್ತೆ ಈ ಸಂಬಂಧ ವಿಚಾರಣೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ಸೇರಿ ಐವರು ನಾಳೆ ಕೋರ್ಟ್‌ಗೆ ಹಾಜರಾಗಲಿದ್ದಾರೆ.

 

Share Post