CrimeNational

ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ಮಾಹಿತಿ; ಹಲವೆಡೆ ಎನ್‌ಐಎ ಅಧಿಕಾರಿಗಳ ದಾಳಿ

ಶ್ರೀನಗರ; ಜಮ್ಮು ಕಾಶ್ಮೀರದಲ್ಲಿ ಎಷ್ಟೇ ಬಿಗಿ ಮಾಡಿದರೂ ಭಯೋತ್ಪಾದಕ ಚಟುವಟಿಕೆಗಳು ಮಾತ್ರ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಎನ್‌ಐಎ ಅಧಿಕಾರಿಗಳು ಶ್ರೀನಗರದ ಹಲವು ದಾಳಿ ನಡೆಸಿದ್ದಾರೆ. ಸೈಬರ್‌ ಸ್ಪೇಸ್‌ ಬಳಸಿಕೊಂಡು ಭಯೋತ್ಪಾದನಾ ಚಟುವಟಿಕೆ ಹಾಗೂ ಹಣಕಾಸಿನ ನೆರವು ನೀಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಶ್ರೀನಗರದಲ್ಲಿ ವಾಸವಿರುವ ನಿಷೇದಿತ ಭಯೋತ್ಪಾದಕ ಸಂಘಟನೆಗಳ ಮುಖ್ಯಸ್ಥರು ಹಾಗೂ ಸದಸ್ಯರುಗಳ ಮನೆಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮ್ಮು-ಕಾಶ್ಮೀರದ ವಿವಿಧೆಡೆ ಕೂಡಾ ಶೋಧಕಾರ್ಯ ನಡೆಸಲಾಗುತ್ತಿದೆ. ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಸಂಚು ರೂಪಿಸಲಾಗುತ್ತಿತ್ತು. ಜೊತೆಗೆ ಕೋಮು ಸಾಹಾರ್ದತೆ ಕದಡುವ ಕೆಲಸ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಹೀಗಾಗಿಯೇ ಈ ಪರಿಶೀಲನೆ ನಡೆಯುತ್ತಿದೆ.

ಕುಲ್ಗಾಂ, ಪುಲ್ವಾಮಾ, ಅನಂತ್ ನಾಗ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಎನ್‌ಐಎ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದು, ಪುಲ್ವಾಮಾ ನಿವಾಸಿ ಸರ್ತಾಜ್ ಅಲ್ತಾಫ್ ಭಟ್ ಎಂಬ ಪತ್ರಕರ್ತನನ್ನು ಈಗಾಗಲೇ ಬಂಧಿಸಲಾಗಿದೆ.

Share Post