CrimeDistrictsPolitics

ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣ; ವರ್ಗಾವಣೆ ಹಿಂಪಡೆದ ಕೆಎಸ್‌ಆರ್‌ಟಿಸಿ

ಮಂಡ್ಯ; ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ನಾಗಮಂಗಲದ KSRTC ಬಸ್ ಚಾಲಕ ಕಂ ನಿರ್ವಾಹಕ ಜಗದೀಶ್‌ ಆತ್ಮಹತ್ಯೆ ಯತ್ನ ಮಾಡಿದ್ದರು. ಇದೀಗ ಅವರು ಸಾವುಬದುಕಿನ ನಡುವೆ ಹೋರಾಟ ಮಾಡುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಏನೂ ಹೇಳಲು ಆಗೋದಿಲ್ಲ ಅಂತ ವೈದ್ಯರು ತಿಳಿಸಿದ್ದಾರೆ. ಈ ನಡುವೆ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಚುನಾವಣೆಯಲ್ಲಿ ಜಗದೀಶ್‌ ಅವರ ಕುಟುಂಬ ಜೆಡಿಎಸ್‌ ಪರ ಕೆಲಸ ಮಾಡಿದ್ದಕ್ಕೆ ಸ್ಥಳೀಯ ಹಾಲಿ ಶಾಸಕ ಹಾಗೂ ಸಚಿವ ಚಲುವರಾಯಸ್ವಾಮಿ ಈ ರೀತಿ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜಗದೀಶ್‌ ಆತ್ನಹತ್ಯೆ ಯತ್ನಕ್ಕೆ ಚಲುವರಾಯಸ್ವಾಮಿಯವರ ದ್ವೇಷದ ರಾಜಕಾರಣವೇ ಕಾರಣ ಎಂದು ಜಗದೀಶ್‌ ಕುಟುಂಬದವರು ಹೇಳುತ್ತಿದ್ದಾರೆ.  ಜಗದೀಶ್‌ ಅವರ ಪತ್ನಿ ಜೆಡಿಎಸ್‌ ಬೆಂಬಲಿತ ಗ್ರಾಪಂ ಸದಸ್ಯೆಯಾಗಿದ್ದಾರೆ. ಹೀಗಾಗಿ, ಚುನಾವಣೆಯಲ್ಲಿ ಜಗದೀಶ್‌ ಕುಟುಂಬ ಸುರೇಶ್‌ ಗೌಡರ ಪರ ಕೆಲಸ ಮಾಡಿತ್ತು. ಇದೇ ದ್ವೇಷದಿಂದ ಜಗದೀಶ್‌ರನ್ನು ವರ್ಗಾವಣೆ ಮಾಡಿ ಕಿರುಕುಳ ನೀಡಲಾಗಿದೆ. ಈ ಕಾರಣಕ್ಕೆ ಜಗದೀಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ಪ್ರಕರಣಕ್ಕೆ ರಾಜಕೀಯ ತಿರುವು ಪಡೆಯುತ್ತಿದ್ದಂತೆ ಜಗದೀಶ್‌ ಅವರ ವರ್ಗಾವಣೆಯನ್ನು ರದ್ದು ಮಾಡಲಾಗಿದೆ.

 

Share Post