CrimeDistricts

ಮಹಿಳೆ ಅಪಹರಣ ಪ್ರಕರಣ; ಮತ್ತೆ ನಾಲ್ವರ ಬಂಧನ

ಮೈಸೂರು; ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಮಹಿಳೆಯೊಬ್ಬರ ಕಿಡ್ನಾಪ್ ಸಂಬಂಧ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.. ಮಾಜಿ ಸಚಿವ ರೇವಣ್ಣ ಅವರನ್ನು ಇದೇ ಪ್ರಕರಣದ ಸಂಬಂಧ ಬಂಧಿಸಲಾಗಿತ್ತು.. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  ಇದೀಗ ಪ್ರಕರಣದ ಸಂಬಂಧ ಯುವ ಜನತಾದಳ‌ ಮಾಜಿ ಅಧ್ಯಕ್ಷ ಹೆಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು, ವಕೀಲ‌ ತಿಮ್ಮಪ್ಪ ಎಂಬುವವರನ್ನು ಬಂಧಿಸಲಾಗಿದೆ.. ಇವರೆಲ್ಲಾ ಮಹಿಳೆಯರ ಅಪಹರಣಕ್ಕೆ ಸಹಕರಿಸಿದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ..

ನಿನ್ನೆಯಷ್ಟೆ ಸುದ್ದಿಗೋಷ್ಠಿ ನಡೆಸಿದ್ದ ತಿಮ್ಮಪ್ಪ, ರೇವಣ್ಣ ಪರ ಮಾತನಾಡಿ ಪೊಲೀಸರ ವಿರುದ್ಧ ಆರೋಪಿಸಿದ್ದರು.

Share Post