CrimeDistricts

ಶಾಸಕ ಅಜಯ್‌ ಸಿಂಗ್‌ ಮನೆ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ; ಶಾಸಕರ ನಿವಾಸದ ಆವರಣದಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಕಲಬುರಗಿಯ ಶರಣನಗರದಲ್ಲಿ ನಡೆದಿದೆ. ಇಲ್ಲಿ ಮಾಜಿ ಸಿಎಂ ಧರಂಸಿಂಗ್‌ ಪುತ್ರ, ಜೇವರ್ಗಿ ಶಾಸಕ ಹಾಗೂ KKRDB ಅಧ್ಯಕ್ಷ ಅಜಯ್‌ ಸಿಂಗ್‌ ಅವರ ನಿವಾಸವಿದೆ. ಈ ನಿವಾಸದ ಆವರಣದಲ್ಲಿರುವ ಮರಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು 35 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ಈತ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಆದ್ರೆ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share Post